ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಅವರು ಉತ್ಸವದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು. ‘ಧಾರ್ಮಿಕ ಕಾರ್ಯಗಳು ಮನುಷ್ಯನ ಬದುಕಿಗೆ ನೆಮ್ಮದಿ ನೀಡುತ್ತವೆ. ಆಷಾಢ ಮಾಸದಲ್ಲಿ ದೇವಿಯರಿಗೆ ವಿಶೇಷ ಶಕ್ತಿ ಇರುತ್ತದೆ. ಹಾಗಾಗಿ ಈ ಮಾಸದಲ್ಲಿ ಚಾಮುಂಡೇಶ್ವರಿ, ಅಣ್ಣಮ್ಮ, ಮಾರಮ್ಮ, ತ್ರಿಪುರಸುಂದರಿ ಸೇರಿದಂತೆ ಎಲ್ಲಾ ಶಕ್ತಿದೇವತೆಗಳ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಆಚರಣೆ ಗಳು ನಡೆಯುತ್ತವೆ’ ಎಂದರು.