ಶ್ರೀನಗರ: ಸೋಮವಾರ ಬೆಳಗ್ಗೆ ಪೂಂಛ್ ಜಿಲ್ಲೆಯ ಬಾಲಕೋಟ್ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತದ ಓರ್ವ ಯೋಧ ಹುತಾತ್ಮರಾಗಿದ್ದು, 9 ವರ್ಷದ ಬಾಲಕಿ ಗುಂಡಿಗೆ ಬಲಿಯಾಗಿದ್ದಾಳೆ.
ಅದೇ ವೇಳೆ ರಜೌರಿಯ ಮಂಜಾಕೋಟ್ ವಲಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಸುದ್ದಿಮೂಲಗಳು ವರದಿ ಮಾಡಿವೆ.
ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಜೌರಿಯಲ್ಲಿ ಶೆಲ್ ದಾಳಿ ನಡೆದಿದ್ದು, ಪಾಕ್ ದಾಳಿಗೆ ಭಾರತ ತಕ್ಕ ಪ್ರತಿಕ್ರಿಯೆ ನೀಡಿದೆ.
#WATCH Ceasefire violation by Pakistan along the LoC in Rajouri's Manjakote sector (J&K). Indian Army retaliating. pic.twitter.com/EVZfMFYNU2