ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ಎಂ.ವೆಂಕಯ್ಯ ನಾಯ್ಡು

Last Updated 17 ಜುಲೈ 2017, 14:18 IST
ಅಕ್ಷರ ಗಾತ್ರ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು  ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ಬಿಜೆಪಿಯ ಸಂಸದೀಯ ಮಂಡಳಿ ಸಭೆ ಸೇರಿ ವೆಂಕಯ್ಯ ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ.

ವೆಂಕಯ್ಯ ನಾಯ್ಡು ಅವರು ಸದ್ಯ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ನಿರ್ವಹಿಸುತ್ತಿದ್ದಾರೆ.  ಆಗಸ್ಟ್‌ 05ರಂದು ಚುನಾವಾಣೆ ನಡೆಯಲಿದೆ.
ನಾಮ ಪತ್ರ ಸಲ್ಲಿಕೆಗೆ ಜುಲೈ 18ಕೊನೆಯ ದಿನವಾಗಿದ್ದು, ಸದ್ಯ ಕಾರ್ಯನಿರ್ವಹಿಸುತ್ತಿರುವ ಹಮೀದ್‌ ಅನ್ಸಾರಿ ಅವರ ಅಧಿಕಾರ ಅವಧಿ ಆಗಸ್ಟ್‌ 10ಕ್ಕೆ ಕೊನೆಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT