‘ಶರತ್ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಸ್ಫೋಟಕ ಮಾಹಿತಿ ಇದೆ. ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣದ ತನಿಖೆ ಹಸ್ತಾಂತರಿಸಿದರೆ ನನ್ನ ಬಳಿ ಇರುವ ಮಾಹಿತಿಯನ್ನು ತನಿಖಾ ತಂಡಕ್ಕೆ ತಿಳಿಸುತ್ತೇನೆ’ ಎಂದು ಶುಕ್ರವಾರ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು. ಅದೇ ದಿನ ನೋಟಿಸ್ ನೀಡಿದ್ದ ಪ್ರಕರಣದ ತನಿಖಾಧಿಕಾರಿ, ಸೋಮವಾರ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.