ಬೆಂಗಳೂರು: ಬತ್ತಿಹೋದ ಕೆರೆ, ಕಟ್ಟೆಗಳನ್ನು ಡಿನೋಟಿಫೈ ಮಾಡುವುದು ಸೂಕ್ತವಲ್ಲ. ಜಲಮೂಲಗಳನ್ನು ಉಳಿಸಿಕೊಂಡು ಅವುಗಳನ್ನು ಪುನರುಜ್ಜೀವನಗೊಳಿಸಬೇಕಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ನೀರಿಲ್ಲದ ಕರೆ, ಕಟ್ಟೆಗಳನ್ನು ಡಿನೋಟಿಫೈ ಮಾಡಲು ಕಂದಾಯ ಇಲಾಖೆ ಸಿದ್ಧಪಡಿಸಿದ ಪ್ರಸ್ತಾವನೆಗೆ ಮತ್ತೆ ವಿರೋಧ ವ್ಯಕ್ತಪಡಿಸಿ ಮಾತನಾಡಿದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಇಂತಹ ಹೊತ್ತಿನಲ್ಲಿ ಜಲಮೂಲಗಳನ್ನು ಮುಂದಿನಪೀಳಿಗೆಗೆ ಉಳಿಸಿಕೊಳ್ಳಬೇಕಾಗಿದೆ ಎಂದರು.