ಕೋತಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಗ್ರಾಮ ಪಂಚಾಯಿತಿ, ಅರಣ್ಯ ಇಲಾಖೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ನಿವಾಸಿ ಜಗದೀಶ ರೆಡ್ಡಿ ಆರೋಪಿಸಿದರು. ಭಯಭೀತರಾದ ಜನರು ಅರಣ್ಯ ಇಲಾಖೆ ಸಿಬ್ಬಂದಿ ಬರುವಿಕೆಗಾಗಿ ಕಾಯದೆ ತಾವೇ ಗುಂಪಾಗಿ ಹೊರವಲಯದ ಗುಡ್ಡದಲ್ಲಿ ಬೀಡುಬಿಟ್ಟಿರುವ ಕೋತಿಗಳನ್ನು ಓಡಿಸಲು ಮುಂದಾದರು.