ಯಾದಗಿರಿ: ಪೊಲೀಸ್ ಕಾನ್ಸ್ಟೆಬಲ್ ಪತ್ನಿಗೆ ವಿಷ ಉಣಿಸಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ನಗರಠಾಣೆಯ ಕಾನ್ಸ್ಟೆಬಲ್ ಮಹೇಂದ್ರ ಈ ಕೃತ್ಯವೆಸನಿದ್ದಾನೆ. ಹಣಮಂತಿ (26) ಕೊಲೆಯಾದ ಮಹಿಳೆ.
ನಗರದ ಪೊಲೀಸ್ ವಸತಿ ಗೃಹದಲ್ಲಿ ಭಾನುವಾರ ಮಧ್ಯರಾತ್ರಿ ವಿಷ ಕುಡಿಸಿ ಕೊಲೆ ಮಾಡಿದ್ದಾನೆ ಎಂದು ಮೃತಳ ತಂದೆ ಈರಪ್ಪ ದೂರು ನೀಡಿದ್ದಾರೆ.
ಆರೋಪಿ ತಲೆಮರೆಸಿಕೊಂಡಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳುವುದಾಗಿ ನಗರಠಾಣೆ ಪಿಎಸ್ಐ ಮಹಾಂತೇಶ್ ಸಜ್ಜನ್ ತಿಳಿಸಿದ್ದಾರೆ.