ರಾಜ್ಯದ 174 ತಾಲ್ಲೂಕುಗಳ ಪೈಕಿ ಕಳೆದ ವರ್ಷ ಮುಂಗಾರು ವೈಫಲ್ಯದಿಂದಾಗಿ 139 ತಾಲ್ಲೂಕುಗಳನ್ನು ಹಾಗೂ ಹಿಂಗಾರು ವೈಫಲ್ಯದಿಂದಾಗಿ 160 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಈ ವರ್ಷ ಜುಲೈ ತಿಂಗಳು ಕೊನೆಯಾಗುತ್ತಾ ಬಂದರೂ ವರುಣ ಕೃಪೆ ತೋರಿಲ್ಲ, ಜಲಾಶಯಗಳಲ್ಲಿ ನೀರಿಲ್ಲ, ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಕಳೆದ ವರ್ಷ ಈ ಅವಧಿಯಲ್ಲಿ 84 ಟಿಎಂಸಿ ನೀರು ಸಂಗ್ರಹವಾಗಿತ್ತು.