ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗುತ್ತಿರುವ ನಡುವೆಯೇ, ಅವರಿಗೆ ನೀಡಿದ ಚಿಕಿತ್ಸೆ ಕುರಿತು ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಅಪೊಲೊ ಆಸ್ಪತ್ರೆ ಕಾರ್ಯನಿರ್ವಾಹಕ ಮುಖ್ಯಸ್ಥ ಡಾ. ಪ್ರತಾಪ್ ಸಿ.ರೆಡ್ಡಿ ಅವರು ಹೇಳಿದ್ದಾರೆ.
‘ನಾವು ಸಿದ್ಧರಿದ್ದೇವೆ. ನಮ್ಮ ಬಳಿ ಎಲ್ಲಾ ದಾಖಲೆಗಳಿವೆ. ಜಯಲಲಿತಾ ಅವರಿಗೆ ನೀಡಲಾದ ಚಿಕಿತ್ಸೆಯಲ್ಲಿ ಯಾವುದೇ ಹಸ್ತಕ್ಷೇಪವಾಗಿಲ್ಲ’ ಎಂದು ರೆಡ್ಡಿ ತಿಳಿಸಿದ್ದಾರೆ.