ಇಲಾಖೆಯನ್ನು 2012 ರಲ್ಲಿ ಪುನರ್ ರಚನೆ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ, ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡದ ಕಾರಣ ಕಳೆದ ಐದು ವರ್ಷಗಳಿಂದ ಪದೋನ್ನತಿ ಸಿಕ್ಕಿರಲಿಲ್ಲ. ರಾಜ್ಯದ ಅರ್ಧಕ್ಕೂ ಹೆಚ್ಚಿನ ತಾಲ್ಲೂಕುಗಳಲ್ಲಿ ಪಶುವೈದ್ಯಾಧಿಕಾರಿಗಳೇ ಹೆಚ್ಚುವರಿ ಪ್ರಭಾರದಲ್ಲಿ ಸಹಾಯಕ ನಿರ್ದೆಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮವಾಗುತ್ತಿದೆ ಎಂದು ಕರ್ನಾಟಕ ಪಶು ವೈದ್ಕಕೀಯ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು.