ಬುಧವಾರ ಹಠಾತ್ ನಿರ್ಧಾರ ಕೈಗೊಂಡು ಆರ್ಜೆಡಿ, ಕಾಂಗ್ರೆಸ್ ಜತೆಗಿನ ಮೈತ್ರಿಕೂಟದಿಂದ ಹೊರಬಂದಿದ್ದ ನಿತೀಶ್ ಅವರು ಎನ್ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದರು. ಆರ್ಜೆಡಿ ನಾಯಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಿಂದಾಗಿ ನಿತೀಶ್ ಈ ನಿರ್ಧಾರ ಕೈಗೊಂಡಿದ್ದರು. 2014ರ ಲೋಕಸಭೆ ಚುನಾವಣೆ ಸಂದರ್ಭ ನಿತೀಶ್ ಅವರು ಎನ್ಡಿಎ ಜತೆ ಮೈತ್ರಿ ಮುರಿದುಕೊಂಡಿದ್ದರು.