ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿತ್‌, ತೃಪ್ತಿಗೆ ಪ್ರಶಸ್ತಿ

Last Updated 12 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಹೊಸಪೇಟೆ: ರೋಹಿತ್‌ ಶಂಕರ್‌ ಮತ್ತು ತೃಪ್ತಿ ಪುರೋಹಿತ್‌ ಅವರು ನಗರದಲ್ಲಿ ನಡೆಯುತ್ತಿರುವ ರಾಜ್ಯ ರ್‍ಯಾಂಕಿಂಗ್ ಟೇಬಲ್‌ ಟೆನಿಸ್‌ ಟೂರ್ನಿಯ ಕೆಡೆಟ್‌ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರೋಹಿತ್‌ 11–1, 11–6, 11–8ರಲ್ಲಿ ಹೃಷಿಕೇಶ್‌ ಶತಲೂರು ಮೇಲೂ, ಬಾಲಕಿಯರ ವಿಭಾಗದಲ್ಲಿ ತೃಪ್ತಿ ಪುರೋಹಿತ್‌ 11–5, 11–4, 11–8ರಲ್ಲಿ ಪಿ.ಎಂ. ಶ್ವೇತಾ ವಿರುದ್ಧವೂ ಗೆಲುವು ಸಾಧಿಸಿದರು.

ಈ ನಾಲ್ಕೂ ಜನ ಸ್ಪರ್ಧಿಗಳು ಬೆಂಗಳೂರಿನವರು. ಮೂರು ದಿನ ಟೂರ್ನಿ ನಡೆಯಲಿದ್ದು ಭಾನುವಾರ 15 ವರ್ಷದ ಒಳಗಿನವರ ಬಾಲಕ ಮತ್ತು ಬಾಲಕಿಯರ ಸಬ್‌ ಜೂನಿಯರ್ ವಿಭಾಗದಲ್ಲಿ ಪಂದ್ಯಗಳು ಜರುಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT