ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

Last Updated 12 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಲಖನೌ: ಗೋರಖಪುರ ಬಿಆರ್‌ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ಸರಣಿ ಮುಂದುವರಿದಿದ್ದು, 48 ಗಂಟೆಗಳಲ್ಲಿ ಆಮ್ಲಜನಕದ ಕೊರತೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 60ಕ್ಕೆ ಏರಿದೆ. ಗುರುವಾರ ಮತ್ತು ಶುಕ್ರವಾರ 30ರಷ್ಟಿದ್ದ ಮಕ್ಕಳ ಸಾವಿನ ಸಂಖ್ಯೆ ಶನಿ
ವಾರ ಒಂದೇ ದಿನದಲ್ಲಿ ದುಪ್ಪಾಟ್ಟಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆಮ್ಲಜನಕ ಕೊರತೆಯಲ್ಲ!: ಮಕ್ಕಳ ಸಾವಿಗೆ ಆಮ್ಲಜನಕ ಕೊರತೆ ಕಾರಣವಲ್ಲ. ಬದಲಾಗಿ ಆಸ್ಪತ್ರೆಯ ಗಲೀಜು ಮತ್ತು ಕೊಳಕು ವಾತಾವರಣ ಕಾರಣ ಎಂದು ಉತ್ತರ ಪ್ರದೇಶ ಸರ್ಕಾರ ಸ್ಪಷ್ಟಪಡಿಸಿದೆ.

ಗುರುವಾರ ರಾತ್ರಿ 2 ತಾಸು ಆಮ್ಲಜನಕ ಕೊರತೆ ಎದುರಾಗಿದ್ದು ಸತ್ಯ. ಆದರೆ, ಸಾವಿಗೆ ಅದೊಂದೇ ಕಾರಣವಲ್ಲ ಎಂದು ಆರೋಗ್ಯ ಸಚಿವ ಸಿದ್ಧಾರ್ಥನಾಥ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ವಿವಾದ ಸೃಷ್ಟಿಸಿದ ಸಚಿವ: ‘ಕಳೆದ ವರ್ಷ ಆಗಸ್ಟ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿನ ಸಂಖ್ಯೆಗೆ ಹೋಲಿಸಿದರೆ ಈ ಆಗಸ್ಟ್‌ನಲ್ಲಿ ಸಾವಿನ ಸಂಖ್ಯೆ ಅಂಥ ದೊಡ್ಡದೇನಲ್ಲ’ ಎಂದು ಸಿಂಗ್‌ ಹೇಳಿದ್ದು ವಿವಾದ ಸೃಷ್ಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT