ಸಣ್ಣ ಕೈಗಾರಿಕೆ ಖಾತೆ ಹೊಂದಿದ್ದ ರಮೇಶ ಜಾರಕಿಹೊಳಿ ಅವರಿಗೆ ಸಹಕಾರ ಖಾತೆ ನೀಡಲಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕೌಶಲ್ಯ ಅಭಿವೃದ್ಧಿ ಹೊಣೆಯನ್ನೂ ವಹಿಸಲಾಗಿದೆ. ಅಲ್ಲದೆ, ರಾಜ್ಯ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ (ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ), ರುದ್ರಪ್ಪ ಮಾನಪ್ಪ ಲಮಾಣಿ (ಜವಳಿ ಮತ್ತು ಮುಜರಾಯಿ), ಪ್ರಮೋದ್ ಮಧ್ವರಾಜ್ (ಯುವಜನ ಸೇವೆ ಮತ್ತು ಮೀನುಗಾರಿಕೆ) ಮತ್ತು ಈಶ್ವರ ಬಿ. ಖಂಡ್ರೆ ( ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆ) ಅವರಿಗೆ ಸಂಪುಟ ದರ್ಜೆ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ.