ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮರಾಜ ದಂಡಾವತಿ, ಪದ್ಮಾ ಶೇಖರ್ ಗೆ ಚಾವುಂಡರಾಯ ಪ್ರಶಸ್ತಿ

Last Updated 11 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2016ನೇ ಸಾಲಿನ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರು ಭಾಜನರಾಗಿದ್ದಾರೆ.

2017ನೇ ಸಾಲಿನ ಇದೇ ಪ್ರಶಸ್ತಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪದ್ಮಾ ಶೇಖರ್ ಆಯ್ಕೆಯಾಗಿದ್ದಾರೆ. ತಲಾ ₹30,000 ನಗದು ಪುರಸ್ಕಾರ ಮತ್ತು ಸ್ಮರಣಿಕೆಗಳನ್ನು ಈ ಪ್ರಶಸ್ತಿ ಒಳಗೊಂಡಿದೆ.

ವರ್ಷದ ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ ‘ಅಂಕಿತ ಪುಸ್ತಕ ಪುರಸ್ಕಾರ ದತ್ತಿ ಪ್ರಶಸ್ತಿ’ ಪಲ್ಲವ ಪ್ರಕಾಶನ ಸಂಸ್ಥೆಗೆ ಲಭಿಸಿದೆ. ₹ 35,000 ನಗದು ಪುರಸ್ಕಾರವನ್ನು ಈ ಪ್ರಶಸ್ತಿ ಒಳಗೊಂಡಿದೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT