ಥಳಿತಕ್ಕೊಳಗಾಗಿದ್ದ ವ್ಯಕ್ತಿ ಸಾಯುವ ಮುನ್ನ ಪೊಲೀಸರಿಗೆ ನೀಡಿದ್ದ ಹೇಳಿಕೆಯಲ್ಲಿ ಹುಕುಮ್ ಚಂದ್, ನವೀನ್ ಶರ್ಮಾ, ಜಗ್ಮಲ್ ಯಾದವ್, ಓಂಪ್ರಕಾಶ್, ಸುಧೀರ್ ಹಾಗೂ ರಾಹುಲ್ ಸೈನಿ ಎಂಬುವವರನ್ನು ಹೆಸರಿಸಿದ್ದರು. ಆದರೆ, ಇವರು ಕೃತ್ಯ ಎಸಗಿರುವುದಕ್ಕೆ ಸಾಕ್ಷ್ಯಗಳಿಲ್ಲ ಎಂದು ವರದಿ ನೀಡಿರುವ ರಾಜಸ್ಥಾನ ಪೊಲೀಸರು, ಅವರ ವಿರುದ್ಧದ ಎಫ್ಐಆರ್ಗಳನ್ನು ರದ್ದು ಮಾಡಿದ್ದಾರೆ.