ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಹಿರಿಯ ಮುಖಂಡರಾಗಿರುವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಶನಿವಾರ ಸಂಜೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ದಸರಾ ಮೆರವಣಿಗೆಗೆ ಚಾಲನೆ ನೀಡಲಾಯಿತು. 70ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, 30ಕ್ಕೂ ಹೆಚ್ಚು ಹುಲಿ ಕುಣಿತದ ತಂಡಗಳು, ಚೆಂಡೆ, ಕೊಂಬು, ಕಹಳೆ ಸೇರಿದಂತೆ ಹಲವು ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.