‘ಪಕ್ಷದ ಅಧ್ಯಕ್ಷ ಅಮಿತ್ ಷಾ ಬಂದು ಹೋದ ಮೇಲೆ ಕಾಂಗ್ರೆಸ್ ನಾಯಕರ ನಿದ್ದೆಯೇ ಹಾರಿ ಹೋಗಿದೆ. ಒಂದು ಸಮುದಾಯಕ್ಕೆ ಸೀಮಿತವಾಗಿ ‘ಶಾದಿ ಭಾಗ್ಯ’, ಕೆಲವೇ ಸಮುದಾಯಗಳ ಮಕ್ಕಳಿಗೆ ‘ಪ್ರವಾಸ ಭಾಗ್ಯ’ವನ್ನು ಕರುಣಿಸಿ, ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಅವರು ಸಿದ್ದರಾಮಣ್ಣ ಅಲ್ಲ, ಬೆಂಕಿ ರಾಮಣ್ಣ. ಪೆಟ್ರೋಲ್ ಮತ್ತು ಬೆಂಕಿ ಪೊಟ್ಟಣ ಕೈಯಲ್ಲಿ ಹಿಡಿದುಕೊಂಡೇ ಓಡಾಡುತ್ತಿರುತ್ತಾರೆ’ ಎಂದು ಅಶೋಕ್ ಹರಿಹಾಯ್ದರು.