ದಾವಣಗೆರೆ: ‘ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರಿಹರ ಕ್ಷೇತ್ರದಲ್ಲಿ ಸ್ಪರ್ಧಿಸಲು ಇಚ್ಛಿಸಿದರೆ, ನಾನು ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ’ ಎಂದು ಹರಿಹರದ ಜೆಡಿಎಸ್ ಶಾಸಕ ಎಚ್.ಎಸ್.ಶಿವಶಂಕರ್ ಹೇಳಿದರು.
‘ಮುಖ್ಯಮಂತ್ರಿ ಅವರು ಹರಿಹರಕ್ಕೆ ಇದುವರೆಗೆ ನಾಲ್ಕು ಬಾರಿ ಬಂದಿದ್ದಾರೆ. ಅವರು ಇಲ್ಲಿ ಸ್ಪರ್ಧಿಸಿದರೆ ಈ ಕ್ಷೇತ್ರವೂ ಅಭಿವೃದ್ಧಿಯಾಗುತ್ತದೆ. ನಾನು ಬೇರೆ ಕ್ಷೇತ್ರ ನೋಡಿಕೊಳ್ಳುತ್ತೇನೆ’ ಎಂದು ಹರಿಹರ ತಾಲ್ಲೂಕಿನ ಹನಗವಾಡಿಯ ಮೈತ್ರಿವನದಲ್ಲಿ ಭಾನುವಾರ ನಡೆದ ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಭವನದ ಲೋಕಾರ್ಪಣೆಯಲ್ಲಿ ಅವರು ತಿಳಿಸಿದರು.