ನವದೆಹಲಿ: ಇತರೆ ಹಿಂದುಳಿದ ವರ್ಗಗಳಲ್ಲಿನ (ಒಬಿಸಿ) ಒಳ ವರ್ಗೀಕರಣದ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೆಹಲಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಜಿ ರೋಹಿಣಿ ನೇತೃತ್ವದಲ್ಲಿ ಐವರು ಸದಸ್ಯರ ಆಯೋಗವನ್ನು ರಚಿಸಿದ್ದಾರೆ.
ಗುಜರಾತ್ನಲ್ಲಿ ವಿಧಾನಸಭಾ ಚುನಾವಣೆ ನಡೆಯುವುದಕ್ಕಿಂತಲೂ ಮೊದಲು ಹಾಗೂ ಮಹಾರಾಷ್ಟ್ರದಲ್ಲಿ ಮರಾಠರಿಗೆ, ಹರಿಯಾಣದಲ್ಲಿ ಜಾಟರಿಗೆ ಮತ್ತು ಗುಜರಾತಿನಲ್ಲಿ ಪಟೇಲರಿಗೆ ಮೀಸಲಾತಿ ನೀಡಬೇಕು ಎಂಬ ಕೂಗು ಕೇಳಿಬರುತ್ತಿರುವುದರ ನಡುವೆಯೇ ಈ ನಿರ್ಧಾರ ಹೊರಬಿದ್ದಿದೆ.
‘ಅಧ್ಯಕ್ಷರು ಅಧಿಕಾರ ಸ್ವೀಕರಿಸಿದ 12 ವಾರಗಳ ಒಳಗಾಗಿ ಆಯೋಗವು ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕಾಗುತ್ತದೆ’ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.