ರಾಷ್ಟ್ರೀಯ ಪ್ರಶಸ್ತಿ ಹಿಂದಿರುಗಿಸಲು ಹಿಂಜರಿಯಲ್ಲ: ‘ಗೌರಿ ಹತ್ಯೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮನೋಭಾವ ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ಇದನ್ನು ಖಂಡಿಸಿ, ನನಗೆ ಬಂದಿರುವ ‘ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ’ಯನ್ನು ಹಿಂದಿರುಗಿಸಲು ಹಿಂದೆ–ಮುಂದೆ ನೋಡುವುದಿಲ್ಲ’ ಎಂದು ಪ್ರಕಾಶ್ ರೈ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.