ಬೆಂಗಳೂರು: ಹೃದಯದ ಕವಾಟ ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು.
ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 23ರಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಜೆ.ಪಿ.ನಗರದ ಮನೆಯಲ್ಲಿ ಇನ್ನೂ ಒಂದು ತಿಂಗಳು ಅವರು ವಿಶ್ರಾಂತಿ ಪಡೆಯಲಿದ್ದಾರೆ. ನವೆಂಬರ್ 1 ರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.
‘ವೈದ್ಯರ ವಿಶೇಷ ಆರೈಕೆಯಿಂದ ಬಹು ಬೇಗನೇ ಚೇತರಿಸಿಕೊಳ್ಳಲು ಸಾಧ್ಯವಾಗಿದೆ. ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ. ಆದ್ದರಿಂದ ಒಂದು ತಿಂಗಳು ಯಾರನ್ನೂ ಭೇಟಿ ಮಾಡುವುದಿಲ್ಲ’ ಎಂದು ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿ
ಗಳಿಗೆ ತಿಳಿಸಿದರು.