ಬಿಟಿಎಂ ವಿಧಾನಸಭಾ ಕ್ಷೇತ್ರದ ಈಜೀಪುರ ಬಡಾವಣೆಯ ಇಂದಿರಾ ಗಾಂಧಿ ಕೊಳೆಗೇರಿ ಮತ್ತು ಜಯನಗರ 4ನೇ ಟಿ ಬ್ಲಾಕ್ನ 18ನೇ ಮುಖ್ಯ ರಸ್ತೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಭಾಗವಹಿಸಿದ್ದರು. ನಂತರ ಬಡ ಮಕ್ಕಳಿಗೆ ಪುಸ್ತಕ ಹಾಗೂ ಬಡ ಕುಟುಂಬಗಳಿಗೆ ಅಕ್ಕಿ ವಿತರಿಸಿದರು.ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪೌರ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.