ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಐದು ಮಂದಿ ಸಾಧಕರಿಗೆ ವಿಶ್ವಕರ್ಮ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ ಹಾಗೂ ಚಿತ್ರ ನಟ ವಿ.ರವಿಚಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಮೂರು ಜನ ವಿಶ್ವಕರ್ಮ ಸಮಾಜದ ಸಾಧಕರಾಗಿರುತ್ತಾರೆ. ಪ್ರಶಸ್ತಿಯು ಚಿನ್ನದ ಪದಕವನ್ನು ಒಳಗೊಂಡಿರಲಿದೆ ಎಂದು ತಿಳಿಸಿದರು.