‘ಜಿಲ್ಲೆಯಲ್ಲಿ ಅಂದಾಜು 30–40 ವರ್ಷಗಳಿಂದ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಬಡವರು ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಅಲ್ಲದೇ ಆರ್ಥಿಕವಾಗಿ ಸಬಲರಾಗಿಲ್ಲ. ಅವರ ಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಂಡು ರಿಚಯ ಪತ್ರ ನೀಡಬೇಕು. ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರ ಮಾಡಿ, ಕೂಡಲೇ ಕ್ರಯ ಪತ್ರ ಮಾಡಿಕೊಡಬೇಕು ಹಾಗೂ ಖಾಸಗಿ ಪ್ರದೇಶದಲ್ಲಿರುವ ಕೊಳೆಗೇರಿಗಳ ಭೂಮಿಯನ್ನು ಕಾನೂನಾತ್ಮಕವಾಗಿ ಸ್ವಾಧೀನಪಡಿಸಿಕೊಂಡು ನಿವಾಸಿಗಳಿಗೆ ಹಸ್ತಾಂತರಿಸಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.