ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹಿರಿಯ ನಾಗರಿಕರಾದ ಪಾಂಡುರಂಗ ಮತ್ತು ನಾಗರಾಜು ಅವರನ್ನು ಸನ್ಮಾನಿಸಲಾಯಿತು. ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಿವೃತ್ತ ನಾಗರೀಕರ ವೇದಿಕೆ ಅಧ್ಯಕ್ಷ ಅನಂತರಾಮು, ತಹಶೀಲ್ದಾರ್ ಶಿವಶಂಕರಪ್ಪ, ಚೈತನ್ಯ ವೃದ್ಧಾಶ್ರಮದ ನಿರ್ದೇಶಕ ರಾಜಣ್ಣ, ಇಲಾಖೆಯ ಮಲ್ಲೇಶ್, ಕಲಾವಿದ ಬೋರೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಕೆ. ಪದ್ಮಾ ಇದ್ದರು.