ಕೆಇಬಿ ರಸ್ತೆಯ ರಾಧಾ ಎಂಬುವರ ಇಬ್ಬರು ಅಂಗವಿಕಲ ಹೆಣ್ಣುಮಕ್ಕಳಿಗೆ ₹ 25,000 ಧನ ಸಹಾಯ ನೀಡಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ್ ಹೊಡೆನೂರು ಮಾತನಾಡಿ, ‘ವಿದ್ಯಾರ್ಥಿಗಳು ತಾವೇ ವೈಯಕ್ತಿಕವಾಗಿ ಹಣ ಸಂಗ್ರಹಿಸಿ ಆ ಹಣವನ್ನು ಸಮಾಜದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ನೀಡುವ ಮೂಲಕ ಕಳೆದ ಕೆಲವು ವರ್ಷಗಳಿಂದ ಗಾಂಧಿ ಜಯಂತಿ ಆಚರಿಸುತ್ತಿದ್ದಾರೆ. ಇದಕ್ಕೆ ಸಿಬ್ಬಂದಿಯೂ ಕೈ ಜೋಡಿಸುತ್ತಿದ್ದಾರೆ’ ಎಂದರು.