ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜ ಸೇವೆ ಸೋಗಲ್ಲಿ ಬೆದರಿಕೆ: ದೂರು

Last Updated 3 ಅಕ್ಟೋಬರ್ 2017, 8:53 IST
ಅಕ್ಷರ ಗಾತ್ರ

ಹಾವೇರಿ: ‘ಸಮಾಜ ಸೇವಕರಂತೆ ನಟಿಸುತ್ತಾ ಅಧಿಕಾರಿ, ಸಿಬ್ಬಂದಿಗೆ ಬೆದರಿಕೆ ಹಾಕುವವರ ಹಾವಳಿ ಹಾವೇರಿಯಲ್ಲಿ ಹೆಚ್ಚಾಗಿದೆ’ ಎಂದು ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿ ದೂರಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸ್ ಠಾಣೆಯಲ್ಲಿ ಈಚೆಗೆ ನಾಗೇಂದ್ರನಮಟ್ಟಿಯ ಚಂದ್ರು ಗೋವಿಂದಪ್ಪ ಅರೆಪಲ್ಲೆ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

‘ಅವಾಚ್ಯ ಪದಗಳಿಂದ ನಿಂದನೆ, ಕೆಲಸ ಮಾಡದಿದ್ದರೆ ವರ್ಗಾವಣೆ ಮಾಡಿಸುತ್ತೇನೆ ಎಂಬಿತ್ಯಾದಿ ಬೆದರಿಕೆ ಹಾಕಿದ್ದಾನೆ’ ಎಂದು ಮಹಿಳಾ ಸಿಬ್ಬಂದಿ ದೂರು ನೀಡಿರುವುದಾಗಿ ಪೊಲೀಸರು ದೃಢ ಪಡಿಸಿದ್ದಾರೆ.

‘ರಾಜಕೀಯ ಪ್ರಭಾವ ಬಳಸಿಕೊಂಡು ಒತ್ತಡ ಹೇರುವವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಸಿಬ್ಬಂದಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT