ನಿರ್ಜನ ಪ್ರದೇಶದಲ್ಲಿರುವ ಬಾವಿಯಲ್ಲಿ ಜಿಂಕೆ ಬಿದ್ದಿರುವುದನ್ನು ದಾರಿಹೋಕರೊಬ್ಬರು ಕಂಡು ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ಮುಟ್ಟಿಸಿದ್ದರು. ಜಿಲ್ಲಾ ಅಗ್ನಿಶಾಮಕದಳದ ಅಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ ಸುಮಾರು ಐವತ್ತು ಅಡಿ ಆಳದಲ್ಲಿ ಬಿದ್ದಿದ್ದ ಜಿಂಕೆಯನ್ನು ಯಶಸ್ವಿಯಾಗಿ ಹೊರತೆಗೆಯಿತು.