ಸಮನ್ವಯ ಸಮಿತಿ ನಿರ್ಣಯ ಹೇಳುವವರೆಗೂ ಯಾವುದೇ ಹೇಳಿಕೆ ನೀಡಬಾರದು ಎಂದು ನಿರ್ಧರಿಸಲಾಗಿತ್ತು. ಆದರೆ, ಸಭೆ, ಸಮಾವೇಶಗಳಲ್ಲಿ ಈಗ ಬಹಿರಂಗ ಹೇಳಿಕೆ ನೀಡಲಾಗುತ್ತಿದೆ. ಹೀಗಾಗಿ ಸಮಿತಿ ರಚನೆಯಾಗುವುದೇ ಎಂಬ ಸಂಶಯ ಮೂಡಿದೆ. ಮೌಢ್ಯ ನಿಷೇಧ ಕಾಯ್ದೆಯಲ್ಲಿ ವಿವಾದಾತ್ಮಕ ವಿಷಯಗಳನ್ನು ಕೈಬಿಡಲಾಗಿದೆ. ಆದರೆ ಪೂರ್ಣ ಕರಡು ನೋಡಿದ ನಂತರ ವಾಸ್ತವ ತಿಳಿಯಲಿದೆ ಎಂದರು.