ಪಾದಯಾತ್ರೆಯು ಆನವಟ್ಟಿಯಿಂದ ಹೊರಟು ಶಿರಾಳಕೊಪ್ಪ, ಶಿಕಾರಿಪುರ, ಉಡುಗಣಿ, ಈಸೂರು, ಆಯನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳಲಿದ್ದು. ನವೆಂಬರ್ 8ರಂದು ಮುಕ್ತಾಯಗೊಳ್ಳಲಿದೆ. ಸುಮಾರು 150 ಕಿ.ಮೀ. ದೂರವನ್ನು ಪಾದಯಾತ್ರೆಯಲ್ಲಿ ಕ್ರಮಿಸಬೇಕಾಗಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ, ಮಾಜಿ ಸಂಸದ ಎಚ್.ವಿಶ್ವನಾಥ್, ಶಾಸಕ ವೈ.ಎಸ್.ವಿ. ದತ್ತ ಮೊದಲಾದ ನಾಯಕರು ಪ್ರತಿನಿತ್ಯ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.