ಪಾಸ್ಪೋರ್ಟ್ ವಾಪಸ್ ಮಾಡುವುದು, ಒಂದು ಲಕ್ಷ ರೂಪಾಯಿ ಠೇವಣಿ ಮತ್ತು ಇದೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ಭದ್ರತೆ ನೀಡಬೇಕು ಎಂಬುದೂ ಸೇರಿ ಕಠಿಣ ನಿರ್ಬಂಧಗಳನ್ನು ಮುಂದಿಟ್ಟು ನ್ಯಾಯಮೂರ್ತಿ ಸುನಿಲ್ ಥಾಮಸ್ ಅವರು ಜಾಮೀನು ನೀಡಿದರು. ಸಾಕ್ಷ್ಯಗಳನ್ನು ನಾಶ ಮಾಡಬಾರದು ಮತ್ತು ಕರೆದಾಗಲೆಲ್ಲ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ. ‘ದಿಲೀಪ್ ವಿರುದ್ಧದ ತನಿಖೆ ಅಂತಿಮ ಹಂತದಲ್ಲಿದೆ. ಆದ್ದರಿಂದ ಅವರನ್ನು ವಶದಲ್ಲಿಟ್ಟುಕೊಳ್ಳುವುದು ಅಗತ್ಯವಿಲ್ಲ’ ಎಂದು ನ್ಯಾಯಮೂರ್ತಿ ಹೇಳಿದರು.