‘ಶಕ್ತಿಯುತ ಸಿಡಿಮದ್ದುಗಳನ್ನು ಬೇಬಿ ಬೆಟ್ಟದಲ್ಲಿ ಸಿಡಿಸುತ್ತಿದ್ದಾರೆ. ಅಕ್ರಮ ಗಣಿಗಳ ಮಾಲೀಕರು ಪ್ರಾಕೃತಿಕ ಸಂಪನ್ಮೂಲವನ್ನು ನಾಶ ಮಾಡುವ ಉಗ್ರಗಾಮಿಗಳಾಗಿದ್ದಾರೆ. ಮೆಗ್ಗರ್ ಸ್ಫೋಟದಿಂದ ಕಾರ್ಮಿಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ವಾರ ನಡೆದ ಸ್ಫೋಟದಲ್ಲಿ ಕಾರ್ಮಿಕ ಮೃತಪಟ್ಟಿದ್ದು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮತ್ತೊಬ್ಬ ಕಾರ್ಮಿಕ ಮೃತಪಟ್ಟಿದ್ದು ಪ್ರಕರಣವನ್ನು ಮುಚ್ಚಿಹಾಕಿದ್ದಾರೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಕಲ್ಲು ಗಣಿ ಸ್ಫೋಟದಿಂದ ಸಾವು–ನೋವುಗಳಿಗೆ ಲೆಕ್ಕವಿಲ್ಲದಂತಾಗಿದ್ದು ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಹೀಗಾಗಿ ಮಾನವ ಹಕ್ಕುಗಳ ಆಯೋಗ ಗಣಿ ಪ್ರದೇಶಕ್ಕೆ ಭೇಟಿ ನೀಡಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.