ಶೈಕ್ಷಣಿಕವಾಗಿ ಮತ್ತು ಉದ್ಯೋಗದಲ್ಲಿ ಶೇ 7.5 ರಷ್ಟು ಮೀಸಲಾತಿ ನೀಡಬೇಕು, ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಆರಂಭಿಸಬೇಕು, ರಾಜ್ಯದ ಒಂದು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕು, ಎಲ್ಲ ಶಾಲಾ ಕಾಲೇಜುಗಳ ಗ್ರಂಥಾಲಯಗಳಿಗೆ ಮೂಲ ರಾಮಾಯಣ ಗ್ರಂಥವನ್ನು ಪೂರೈಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದೂ ಅವರು ಹೇಳಿದರು.