ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳವಾರ ಹಮ್ಮಿಕೊಂಡಿದ್ದ ‘ಮಹಾಕವಿ ಪಂಪ ನಿನ್ನೆ–ಇಂದು–ನಾಳೆ’ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಾ, ‘ಪಂಪನ ಕಾಲದಲ್ಲಿ ರಾಜಪ್ರಭುತ್ವ ಇದ್ದರೂ, ಧೈರ್ಯವಾಗಿ ರಾಜನ ವಿರುದ್ಧ ಮಾತನಾಡಬಹುದಿತ್ತು. ಈಗ 21ನೇ ಶತಮಾನದಲ್ಲಿದ್ದೇವೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.