ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಪ್ರಕಾಶ್ ರಾಜ್‌ಗೆ ಪ್ರಚಾರದ ಹುಚ್ಚು: ಬಿಜೆಪಿ

Last Updated 3 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ನಟ ಪ್ರಕಾಶ್ ರಾಜ್‌ ಅವರಿಗೆ ಪ್ರಚಾರದ ಹುಚ್ಚು ಇದ್ದರೆ ಯಾವುದಾದರೂ ರಾಜಕೀಯ ಪಕ್ಷ ಸೇರಿಕೊಳ್ಳಲಿ. ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಲಿ’ ಎಂದು ಬಿಜೆಪಿ ಆಗ್ರಹಿಸಿದೆ.

‘ಮೋದಿ ನನಗಿಂತಲೂ ಉತ್ತಮ ನಟ’ ಎಂದು ಕಾರ್ಯಕ್ರಮವೊಂದರಲ್ಲಿ ಪ್ರಕಾಶ್‌ ರಾಜ್‌ ನೀಡಿದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ವಕ್ತಾರ ಎಸ್‌.ಸುರೇಶ್‌ ಕುಮಾರ್‌ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

‘ಕಾವೇರಿ ನದಿ ನೀರಿನ ಸಮಸ್ಯೆ ವಿಷಯದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದ ಪ್ರಕಾಶ್ ರಾಜ್‌ ತಾನೊಬ್ಬ ನಟ ಎಂದಿದ್ದರು. ಈಗ ರಾಜ್ಯದಲ್ಲಿ ನಡೆದ ಹತ್ಯೆಗಳಿಗೆ ಪ್ರಧಾನಿ ಪ್ರತಿಕ್ರಿಯಿಸಬೇಕು ಎಂದು ಅವರು ಹೇಳುವ ಅಗತ್ಯವಿರಲಿಲ್ಲ. ಎದುರಿಗೆ ಇದ್ದ ಜನರಿಂದ ಚಪ್ಪಾಳೆ ಗಿಟ್ಟಿಸುವ ಉದ್ದೇಶಕ್ಕೆ ಹೀಗೆ ಅವರು ಹೇಳಿಕೆ ನೀಡಿದರು’ ಎಂದು ಅವರು ಟೀಕಿಸಿದರು.

‘ಪ್ರಕಾಶ್‌ ಒಬ್ಬ ಅತ್ಯುತ್ತಮ ನಟ. ಸಿನಿಮಾದಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡಿದಂತೆ ಡಿವೈಎಫ್‍ಐ ಕಾರ್ಯಕ್ರ ಮದಲ್ಲಿ ಅವರು ಮಾತನಾಡಿದ್ದಾರೆ. ಅದರಲ್ಲಿ ವಿಶೇಷವೇನೂ ಇಲ್ಲ’ ಎಂದು ಸುರೇಶ್‌ ಕುಮಾರ್‌ ವ್ಯಂಗ್ಯವಾಡಿದರು.

ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಮಾತನಾಡಿ, ‍‘ಪ್ರಧಾ ನಿಯವರನ್ನು ಟೀಕಿಸಿದರೆ ರಾತ್ರೋರಾತ್ರಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ವ್ಯಕ್ತಿಗಳಾಗಬಹುದು ಎಂಬ ಭ್ರಮೆ ಕೆಲವರಿಗೆ ಇದೆ. ಮೋದಿ ಅವರನ್ನು ಟೀಕಿಸುವ ಮೂಲಕ ನಿಮ್ಮ ವ್ಯಕ್ತಿತ್ವಕ್ಕೆ ನೀವೇ ಮಸಿ ಬಳಿದುಕೊಳ್ಳು
ತ್ತಿದ್ದೀರಿ. ಅದನ್ನು ಕೂಡಲೇ ನಿಲ್ಲಿಸಿ’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT