ನಗರದಲ್ಲಿ ಇತ್ತೀಚೆಗೆ ನಡೆದ ‘ಡಿವೈಎಫ್ಐ 11ನೇ ರಾಜ್ಯ ಸಮ್ಮೇಳನ’ದಲ್ಲಿ ಭಾಗವಹಿಸಿದ್ದ ಪ್ರಕಾಶ್ ರೈ, ‘ಗೌರಿ ಲಂಕೇಶ್ ಅವರನ್ನು ಕೊಂದವರು ಯಾರು ಎಂಬ ಸುಳಿವು ಸಿಕ್ಕಿಲ್ಲ. ಆದರೆ, ಈ ಅವರ ಸಾವನ್ನು ಸಂಭ್ರಮಿಸುತ್ತಿರುವ ವಿಕೃತ ಮನಸ್ಸಿನವರು ನಮ್ಮ ಕಣ್ಣಿಗೆ ಕಾಣುತ್ತಿದ್ದಾರೆ. ಈ ಹತ್ಯೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ’ ಎಂದು ಟೀಕಿಸಿದ್ದರು.