‘ಎರಡು ವರ್ಷಗಳಿಂದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗಿದೆ. ಆದರೆ ಲ್ಯಾಪ್ಟಾಪ್ ನೀಡಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದಾಗ, ಫಲಾನುಭವಿಗಳ ಪಟ್ಟಿ ಸಿದ್ಧವಾಗಿದೆ. ತಾಂತ್ರಿಕ ಕಾರಣದಿಂದ ಲ್ಯಾಪ್ಟಾಪ್ಗಳ ವಿತರಣೆ ವಿಳಂಬವಾಗುತ್ತಿದೆ. ತ್ವರಿತವಾಗಿ ಎಲ್ಲವನ್ನೂ ಸರಿಪಡಿಸುತ್ತೇವೆ ಎನ್ನುತ್ತಿದ್ದಾರೆ. ಅಂಧರಿಗೆ ನೆರವಾಗಬೇಕಿದ್ದ ಸರ್ಕಾರವೇ ನಮ್ಮನ್ನು ನಿರ್ಲಕ್ಷಿಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.