ಗುರುಪಾದ ಶಿವಾಚಾರ್ಯರ ಅಂತ್ಯಕ್ರಿಯೆ ಸಂದರ್ಭದಲ್ಲಿಯೇ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಬೇಕಿತ್ತು. ಬಸವಕಲ್ಯಾಣ ತಾಲ್ಲೂಕಿನ ಗೋರಟಾದ ರಾಜಶೇಖರ ಸ್ವಾಮಿ ಅವರನ್ನು ಉತ್ತರಾಧಿಕಾರಿ ಯನ್ನಾಗಿ ನೇಮಕ ಮಾಡಬೇಕು ಎಂದು ಒಂದು ಗುಂಪು ಒತ್ತಾಯಿಸಿದರೆ, ಇನ್ನೊಂದು ಗುಂಪು ಸ್ಥಳೀಯರಾದ ಚಂದ್ರಶೇಖರ ಶಿವಾಚಾರ್ಯರನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸುವಂತೆ ಆಗ್ರಹಿಸಿತು.