ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಲತಡಿಯಲ್ಲಿ ಶವವಾಗಿ ಪತ್ತೆಯಾದ ಬಾಲಕರು

Last Updated 4 ಅಕ್ಟೋಬರ್ 2017, 7:03 IST
ಅಕ್ಷರ ಗಾತ್ರ

ಭಟ್ಕಳ: ತಾಲ್ಲೂಕಿನ ಬೇಂಗ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಸಿಹಿತ್ಲು ಗ್ರಾಮದಿಂದ ಕಾಣೆಯಾಗಿದ್ದ ಇಬ್ಬರು ಬಾಲಕರು ಮಂಗಳವಾರ ಕಾಯ್ಕಿಣಿ ಮಠದ ಹಿತ್ಲು ಕಡಲತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಗಣೇಶ ಮಾಸ್ತಿ ನಾಯ್ಕ (12) ಹಾಗೂ ವಿನಾಯಕ ನಾಗೇಶ ನಾಯ್ಕ (14) ಮೃತಪಟ್ಟವರು.

ಸೋಮವಾರ ಮಧ್ಯಾಹ್ನ ಸೈಕಲ್‌ನಲ್ಲಿ ಸಮುದ್ರ ತೀರಕ್ಕೆ ತೆರಳಿದ್ದ ಇವರು ಕಾಣೆಯಾಗಿದ್ದರು. ಈ ಬಗ್ಗೆ ಕುಟುಂಬದವರಿಗೆ ರಾತ್ರಿಯವರೆಗೂ ಸುಳಿವು ಸಿಕ್ಕಿರಲಿಲ್ಲ. ಬೆಳಿಗ್ಗೆ ಹುಡುಕಾಟ ನಡೆಸಿದಾಗ ಗ್ರಾಮದ ಬಳಿಯ ಸಮುದ್ರ ತೀರದಲ್ಲಿ ಸೈಕಲ್ ಹಾಗೂ ಪಾದರಕ್ಷೆಗಳು ಪತ್ತೆಯಾಗಿವೆ. ಆನಂತರ ಮಠದಹಿತ್ಲು ಕಡಲತೀರದಲ್ಲಿ ಅವರಿಬ್ಬರ ಮೃತದೇಹಗಳು ಸಿಕ್ಕಿವೆ.

ಬೇಂಗ್ರೆಯ ಉಳ್ಮಣ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣೇಶ 6ನೇ ತರಗತಿ ಕಲಿಯುತ್ತಿದ್ದರೆ, ಅಳ್ವೆಕೋಡಿ ದುರ್ಗಾಪರಮೇಶ್ವರಿ ಪ್ರೌಢಶಾಲೆಯಲ್ಲಿ ವಿನಾಯಕ  8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT