ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಶ್ರಿತ ಕನ್ನಡಿಗರ ಶಾಶ್ವತ ಪುನರ್ವಸತಿ: ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಲಿ

Last Updated 4 ಅಕ್ಟೋಬರ್ 2017, 7:06 IST
ಅಕ್ಷರ ಗಾತ್ರ

ಕಾರವಾರ(ಉತ್ತರ ಕನ್ನಡ): ‘ಗೋವಾದ ನಿರಾಶ್ರಿತ ಕನ್ನಡಿಗರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ಗೋವಾದ ಬೈನಾ ಕಡಲತೀರಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಅಲ್ಲಿನ ನಿರಾಶ್ರಿತರ ಕನ್ನಡಿ ಗರ ಸಮಸ್ಯೆಯನ್ನು ಆಲಿಸಿದರು.

‘40 ವರ್ಷಗಳಿಂದ ವಾಸವಾಗಿದ್ದ ಕನ್ನಡಿಗರನ್ನು ಒಕ್ಕಲೆಬ್ಬಿಸಿ, ನಿರಾಶ್ರಿತರನ್ನಾಗಿ ಮಾಡುವ ಮೂಲಕ ಗೋವಾ ಸರ್ಕಾರದ ಅಮಾನವೀಯವಾಗಿ ನಡೆದುಕೊಂಡಿದೆ. ಯಾವುದೇ ನೋಟಿಸ್‌ ನೀಡದೇ ಮನೆಗಳನ್ನು ಹಾಗೂ ಇಲ್ಲಿನ ಬಸವ ಗುಡಿಯನ್ನು ಧ್ವಂಸಗೊಳಿಸಿರುವುದು ಖಂಡನೀಯ’ ಎಂದು ಕಿಡಿಕಾರಿದರು.

ಭೂಮಿ ನೀಡಲಿ: ‘ಇದೇ ಬೈನಾ ಕಡಲತೀರದಲ್ಲಿ 2014ರಲ್ಲಿ ಕನ್ನಡಿಗರ ಮನೆಗಳನ್ನು ನೆಲಸಮಗೊಳಿಸಿದ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ನಿರಾಶ್ರಿತರಿಗೆ ಭೂಮಿ ಒದಗಿಸುವುದಾಗಿ ಭರವಸೆ ನೀಡಿದ್ದರು. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ ಹಾಗೂ ಆ ಜಾಗದಲ್ಲಿ ಕರ್ನಾಟಕ ಸರ್ಕಾರ ಮನೆ ನಿರ್ಮಿಸಿಕೊಡಬೇಕು’ ಎಂದು ಒತ್ತಾಯಿಸಿದರು.

‘ಕೇಂದ್ರ ಗೃಹ ಸಚಿವರು ಮಧ್ಯ ಪ್ರವೇಶಿಸಿ, ಸಮಸ್ಯೆ ಬಗೆಹರಿಸುವಂತೆ ಕರ್ನಾಟಕ ಸರ್ಕಾರ ಒತ್ತಡ ಹೇರಬೇಕು. ಇಲ್ಲವಾದರೆ ಸರ್ಕಾರವೇ ಮಾನವೀಯ ಆಧಾರದ ಮೇಲೆ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT