ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಗಿಲ್ನೆಟ್ ಮೀನುಗಾರರ ಸಂಘದ ಅಧ್ಯಕ್ಷ ಅಲಿ ಹಸನ್, ಮೀನುಗಾರಿಕೆ ಆರಂಭವಾಗಿ ತಿಂಗಳು ಕಳೆದರೂ, ಗಿಲ್ನೆಟ್ ಮತ್ತು ನಾಡದೋಣಿಗೆ ಸಬ್ಸಿಡಿ ಸೀಮೆ ಎಣ್ಣೆ ಪರವಾನಗಿ ನವೀಕರಣ ಮಾಡಿಲ್ಲ. ಮೀನುಗಾರಿಕೆಗೆ ಬೇಕಾದ ಸೀಮೆ ಎಣ್ಣೆಯನ್ನು ಸಕಾಲದಲ್ಲಿ ಪೂರೈಕೆ ಮಾಡಬೇಕು. ಇಲ್ಲದಿದ್ದರೆ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್, ಆಹಾರ ಸಚಿವ ಯು.ಟಿ. ಖಾದರ್ ನಿವಾಸದ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು.