ಪಡುಬಿದ್ರಿ ಸಮೀಪದ ಉಚ್ಚಿಲದ ಅವರ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಂಗಳವಾರ ಮಾತನಾಡಿ, ‘ಭ್ರಷ್ಟಾಚಾರ ನಿಯಂತ್ರಣ, ಅಸ್ಪೃಶ್ಯತೆ ನಿವಾರಣೆ, ಮಹಿಳಾ ಪರ, ಪರಿಸರ ಸಂರಕ್ಷಣೆ ಉದ್ದೇಶ ಇಟ್ಟುಕೊಂಡು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸುವ ತೀರ್ಮಾನ ಮಾಡಿದ್ದು, ಈಗಾಗಲೇ ಸಮಾನ ಮನಸ್ಕರ ಜತೆ ಸಮಾಲೋಚನಾ ಸಭೆಯನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದರು.