ಜ್ವರದಿಂದ ಬಳಲುತ್ತಿರುವ ತಾಯಿ ಮತ್ತು ಮಗನನ್ನು ಅವರ ಸಂಬಂಧಿಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ವೈದ್ಯರು ತಪಾಸಣೆ ನಡೆಸಿದಾಗ ತಾಯಿ ಮತ್ತು ಮಗ ಇಬ್ಬರಿಗೂ ಡೆಂಗಿ ಇರುವುದು ಗೊತ್ತಾಗಿತ್ತು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಇರುವುದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗುವಂತೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಸೂಚಿಸಿದ್ದರು. ಆದರೆ, ಚಿಕಿತ್ಸಗೆ ಲಕ್ಷಾಂತರ ರೂಪಾಯಿ ಹಣ ಬೇಕಾಗಿತ್ತು. ಇದರಿಂದ ಬೇಸತ್ತ ಪುನ್ಗೋಡಿ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾರೆ.