ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತದಲ್ಲಿ ಕೇಸು ದಾಖಲು

Last Updated 4 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ರಸ್ತೆಯ ಬಾಲಗಂಗಾಧರನಾಥಸ್ವಾಮೀಜಿ ಮೇಲ್ಸೇತುವೆಯಲ್ಲಿ ರಸ್ತೆ ಗುಂಡಿಗೆ ದಂಪತಿ ಬಲಿಯಾದ ಸಂಬಂಧ ಲೋಕಾಯುಕ್ತ ಸಂಸ್ಥೆ ಬುಧವಾರ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದೆ.

ಜಗಜೀವನರಾಮ್ ನಗರದ ಆಂಥೋಣಿ ಜೋಸೆಫ್ ಮತ್ತು ಅವರ ಪತ್ನಿ ಸಗಾಯ್ ಮೇರಿ ಸೋಮವಾರ ರಾತ್ರಿ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದರು.

‘ರಸ್ತೆಯಲ್ಲಿ ಗುಂಡಿ ಇದ್ದುದರಿಂದಲೇ ದಂಪತಿ ಸಾವಪ್ಪಿದ್ದಾರೆ’ ಎಂಬ ಮಾಧ್ಯಮಗಳ ವರದಿ ಆಧರಿಸಿ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ನೀಡಲು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT