ಕ್ಯಾಂಟೀನ್ ನಿರ್ಮಾಣ ಖಚಿತ: ‘79ನೇ ವಾರ್ಡ್ನಲ್ಲಿ ಬಿಬಿಎಂಪಿಗೆ ಸೇರಿದ ಜಾಗವನ್ನೇ ಅತಿಕ್ರಮಿಸಿ ಅಂಡಾಳಮ್ಮ ದೇವಸ್ಥಾನ ನಿರ್ಮಿಸಿದ್ದಾರೆ. ದೇವಸ್ಥಾನದ ಬಗ್ಗೆ ನಮ್ಮ ತಕರಾರು ಇಲ್ಲ. ದೇವಸ್ಥಾನದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಮುಂದಾದರೆ, ಆ ಜಾಗವನ್ನೂ ದೇವಸ್ಥಾನಕ್ಕೆ ಬಿಟ್ಟುಕೊಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. ಖಾಲಿ ಇರುವ ಪಾಲಿಕೆಯ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ನಿರ್ಧರಿಸಿದ್ದೇವೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.