ಬೆಂಗಳೂರು: ಎಂಬೆಸ್ಸಿ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ಎರಡು ವಾಹನಗಳನ್ನು ‘ಅಕ್ಷಯಪಾತ್ರ ಪ್ರತಿಷ್ಠಾನ’ಕ್ಕೆ ನಗರದಲ್ಲಿ ಬುಧವಾರ ಹಸ್ತಾಂತರಿಸಿತು.
ಸಂಸ್ಥೆಯ ಸಮುದಾಯ ವಿಸ್ತರಣ ಕಾರ್ಯಕ್ರಮದ ಮುಖ್ಯಸ್ಥೆ ಶೈನಾ ಗಣಪತಿ, ‘ನಮ್ಮ ಸಂಸ್ಥೆಯು ಸಮುದಾಯದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದೆ. ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕೆಳಹಂತದ ಕುಟುಂಬಗಳ ಪ್ರಗತಿಗೆ ಒತ್ತು ನೀಡುತ್ತಿದೆ’ ಎಂದರು.
ಅಕ್ಷಯಪಾತ್ರ ಪ್ರತಿಷ್ಠಾನದ ಜತೆಗೆ ಕೈಜೋಡಿಸಿರುವುದು ಖುಷಿ ತಂದಿದೆ. ಹಸ್ತಾಂತರಿಸಿದ ವಾಹನಗಳ ಮೂಲಕ ಸರ್ಕಾರಿ ಶಾಲೆಗಳ ಮಕ್ಕಳಿಗೆ ಹಾಲು ವಿತರಣೆ ಮಾಡಲಾಗುತ್ತದೆ. ಇದರಿಂದ ಒಟ್ಟು ಸುಮಾರು 13,000 ಮಕ್ಕಳಿಗೆ ಸಹಾಯವಾಗಲಿದೆ. ಪ್ರತಿಷ್ಠಾನದ ಬಿಸಿಯೂಟ ಯೋಜನೆಗೂ ಸಂಸ್ಥೆ ನೆರವು ನೀಡುತ್ತಿದೆ ಎಂದು ಹೇಳಿದರು.
ನಗರದಲ್ಲಿ 17 ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಒದಗಿಸಲು ಸಂಸ್ಥೆ ಆರ್ಥಿಕ ನೆರವು ನೀಡಿದೆ. 3 ಶಾಲಾ ಕಟ್ಟಡ ನಿರ್ಮಿಸಲು ಸಹಾಯ ಮಾಡಿದೆ ಎಂದರು.