ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಸಮಿತಿ ಅಧ್ಯಕ್ಷ ಮಹಾದೇವಪ್ಪ ಭೋವಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ರಾಜೇಂದ್ರ ಸಣ್ಣಕ್ಕಿ ಅವರು, ‘ಅರವಿಂದ ದಳವಾಯಿ ಅವರು ಹಗುರವಾದ ಹೇಳಿಕೆ ನೀಡಿದ್ದಾರೆ. ಕೌಜಲಗಿ ತಾಲ್ಲೂಕು ರಚನೆ ಒತ್ತಾಯಿಸಿ ಹೋರಾಟ ಮಾಡುತ್ತಿರುವುದು ಅವರಿಗೆ ಗೊತ್ತಿದ್ದರು ರಾಜಕೀಯ ದುರುದ್ದೇಶದಿಂದ ವ್ಯತಿರಿಕ್ತ ಹೇಳಿಕೆ ನೀಡಿರುವುದು ಖಂಡನೀಯ’ ಎಂದರು.