ಶ್ರೀಗಂಧಚೋರರು ಗುರುವಾರ ಮುಂಜಾನೆ ದಾಳಿ ನಡೆಸಿರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದು, ಮರಕೊಯ್ಯುವ ಯಂತ್ರದ ಮೂಲಕ ಬಿದರಹಳ್ಳಿಯ ಬಿ.ಬಿ. ನಾರಾಯಣ ಎಂಬುವವರ ಜಮೀನಿನ ಬೇಲಿಯ ಪಕ್ಕದಲ್ಲಿದ್ದ ಒಂದು ಮರ ಹಾಗೂ ಸರ್ಕಾರಿ ಗೋಮಾಳದಲ್ಲಿದ್ದ ನಾಲ್ಕು ಶ್ರೀಗಂಧದ ಮರಗಳನ್ನು ಕಟಾವು ಮಾಡಿದ್ದು, ಅಪಾರ ಪ್ರಮಾಣದ ಶ್ರೀಗಂಧವನ್ನು ದೋಚಿದ್ದಾರೆ. ಘಟನೆಯ ಕುರಿತಂತೆ ಗುರುವಾರ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರೂ, ಸಂಜೆವರೆಗೂ ಯಾವೊಬ್ಬ ಅಧಿಕಾರಿಯೂ ಗ್ರಾಮಕ್ಕೆ ಭೇಟಿ ನೀಡಿಲ್ಲ. ಇದು ಅರಣ್ಯ ಅಧಿಕಾರಿಗಳಿಗೆ ಮೀಸಲು ಅರಣ್ಯವನ್ನು ಸಂರಕ್ಷಿಸುವಲ್ಲಿ ಇರುವ ಕಾಳಜಿಯಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪ್ರಜಾವಾಣಿ ಎದುರು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು.