ತಹಶೀಲ್ದಾರ್ ಕೆ.ಗುರುಬಸವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕೆರೆ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬರಲಿದ್ದು, ದುರಸ್ತಿಗಾಗಿ ಅಧಿಕಾರಿಗೆ ಸೂಚಿಸಲಾಗಿದೆ. ಒಟ್ಟು 200 ಎಕರೆ ಬೆಳೆ ನಾಶವಾಗಿದೆ ಎಂದು ಅಂದಾಜು ಮಾಡಲಾಗಿದೆ. ಗುರುವಾರ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಸಂಗ್ರಹಿಸಲಾಗುವುದು’ ಎಂದು ಹೇಳಿದರು. ರೈತರಾದ ಎಲ್. ಮಂಜ್ಯಾನಾಯ್ಕ, ಚಂದ್ರಾನಾಯ್ಕ ಉಪಸ್ಥಿತರಿದ್ದರು.